Feb 08: ಫೆಬ್ರವರಿ 5, 6 ಮತ್ತು 7ರಂದು ಕಲಬುರಗಿಯಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು ಬಹಳ ಅದ್ದೂರಿಯಾಗಿ ವಿಜೃಂಭಣೆಯಿಂದ ಜರುಗಿತು. ಈ ಮೂರು ದಿನಗಳ ಕಾಲ ಕಲಬುರಗಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದ್ದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕವರ್ಗದವರು ಸಮ್ಮೇಳನದಲ್ಲಿ ಭಾಗವಹಿಸಿದ್ದರು. ದಿನಾಂಕ 5ರಂದು ಶಾಲೆಯ ವಿದ್ಯಾರ್ಥಿನಿಯರು ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ರಂಗೋಲಿ ಸ್ಪರ್ಧೆಯಲ್ಲಿ ಮೊದಲನೆಯ ಬಹುಮಾನ ಪಡೆದರು.

ಫೆಬ್ರವರಿ 7 ರಂದು ನಮ್ಮ ಶಿಕ್ಷಕ ವರ್ಗದವರು ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಸಮ್ಮೇಳನದ ವೇದಿಕಗಳು, ವಿವಿಧ ಪುಸ್ತಕ ಮಳಿಗೆಗಳು, ವಿವಿಧ ವಾಣಿಜ್ಯ ಮಳಿಗೆಗಳು ನಮ್ಮನ್ನು ಆಕರ್ಷಿಸಿದವು. ವಿವಿಧ ವೇದಿಕೆಗಳಲ್ಲಿ ಕವಿ ಗೋಷ್ಠಿಗಳು, ಉಪನ್ಯಾಸಗಳು, ಕವಿಗಳ ರೇಖಾ ಚಿತ್ರಗಳು ಜನರನ್ನು ಆಕರ್ಷಿಸಿದವು.


                                   

 

 

 

ಸಿಸ್ಟರ್ ಕವಿತಾ, ಮುಖ್ಯೋಪಾಧ್ಯಾಯಿನಿ
ಬೆಥನಿ ಪ್ರೌಢ ಶಾಲೆ, ಚಿತ್ತಾಪೂರ