2022-23ನೇ ಸಾಲಿನ ಕಲಬುರಗಿ ವಿಭಾಗ ಮಟ್ಟದ ವಾಲಿಬಾಲ್ ಕ್ರೀಡಾಕೂಟವು ದಿನಾಂಕ 17.10.2022 ರಂದು ರಾಯಚೂರನಲ್ಲಿ ಹಮ್ಮಿಕೊಳ್ಳಲಾಗಿತ್ತು. ಬೆಥನಿ ಪ್ರೌಢ ಶಾಲಾ ಮಕ್ಕಳು ಅದರಲ್ಲಿ ಭಾಗವಹಿಸಿ ಅತಿ ಉತ್ತಮ ಆಟವನ್ನು ಆಡಿ ದ್ವಿತೀಯ ಸ್ಥಾನವನ್ನು ಪಡೆದಿರುವರು. ಇವರ ಉತ್ತಮ ಆಟವನ್ನು ನೋಡಿ ಶಾಲಾ ತಂಡದ 5 ವಿದ್ಯಾರ್ಥಿಗಳನ್ನು ರಾಜ್ಯ ಮಟ್ಟಕ್ಕೆ ಸಮಿತಿಯು ಆಯ್ಕೆ ಮಾಡಿದ್ದಾರೆ. ಇವರು ನಮ್ಮ ಶಾಲೆಗೆ ಹಾಗೂ ನಮ್ಮ ಸಂಸ್ಥೆಗೆ ಕೀರ್ತಿಯನ್ನು ತಂದಿರುವರು. ಈ ಸಾಧನೆಗೆ ಕಾರಣಿಭೂತರಾದ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಕವಿತಾ ಬಿ ಎಸ್ ಹಾಗೂ ದೈಹಿಕ ಶಿಕ್ಷಕರಾದ ಶ್ರೀಯುತ ವಿಶ್ವನಾಥ ಕುಂಬಾರ ಹಾಗೂ ಬೆಥನಿ ಪ್ರೌಢ ಶಾಲೆಯ ಸಿಬ್ಬಂದಿ ವರ್ಗದವರೆಲ್ಲರಿಗೂ ಹಾಗೂ ವಿಜೇತ ವಿದ್ಯಾರ್ಥಿಗಳಿಗೂ ಅಭಿನಂದನೆಗಳು.

ದಿನಾಂಕ 21.10.2022ರಂದು ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಸಿ.ಇ.ಎಸ್ ಪ್ರೌಢ ಶಾಲಾ ಚಳಗೇರಿಯಲ್ಲಿ ರಾಜ್ಯಮಟ್ಟದ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯಮಟ್ಟಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ಹಾಗೂ ಸಿಬ್ಬಂದಿ ವರ್ಗದವರು ಶುಭಕೋರಿದ್ದಾರೆ.

 

 

 

 

 

 

 

ಶ್ರೀಯುತ ವಿಶ್ವನಾಥ ಕುಂಬಾರ, ದೈಹಿಕ ಶಿಕ್ಷಕರು
ಬೆಥನಿ ಪ್ರೌಢ ಶಾಲೆ, ಚಿತ್ತಾಪೂರ

 

Comments powered by CComment

Home | About | NewsSitemap | Contact Us

Copyright © 2016 - www.besmangalore.org . Powered by eCreators

Contact us

Bethany educational Society®
Bethany Convent
Bendur, Mangalore-575002
D.K. Dist, Karnataka State
Tel : 0824 -2223219(O) , 2218923(R)
E-mail : [email protected]